ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಧರ್ಮಕ್ಷೇತ್ರದಲ್ಲಿ ‘ಡ್ರಗ್ಸ್ ವಿರೊಧ ಜಾಗೃತಿ ಮಾಸ’ ಅಭಿಯಾನಕ್ಕೆ ಮಂಗಳೂರಿನ ಬಿಷಪ್ ವಿದ್ಯುಕ್ತ ಚಾಲನೆ

ಮಂಗಳೂರು, ಸೆ.04: ಮಂಗಳೂರಿನ ಬಿಷಪ್ ಆತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಇತ್ತೀಚೆಗೆ ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಷಪ್ ಹೌಸ್‌ನಲ್ಲಿ “ಡ್ರಗ್ಸ್ ವಿರೊಧ ಜಾಗೃತಿ ಮಾಸ” ಅಭಿಯಾನಕ್ಕೆ ಚಾಲನೆ ನೀಡಿದರು.

ಡ್ರಗ್ಸ್ ಮುಕ್ತ ಧರ್ಮಕ್ಷೇತ್ರವನ್ನಾಗಿಸುವ ಗುರಿಯನ್ನು ಹೊಂದಿರುವ ಈ ಅಭಿಯಾನವು ಧರ್ಮಕ್ಷೇತ್ರದ ಪಾಲನಾ ಪರಿಷತ್ ನೇತೃತದಲ್ಲಿ ಮತ್ತು ಕುಟುಂಬ, ಯುವ, ಶಿಕ್ಷಣ, ಆರೋಗ್ಯ ಮತ್ತು ಸಂಪರ್ಕ ಮಾಧ್ಯಮ ಆಯೋಗಗಳ ಸಹಯೋಗದಲ್ಲಿ ನಡೆಯಲಿರುವುದು.

ಬಿಷಪ್ ಸಲ್ಡಾನ್ಹಾ ಆವರು ಡ್ರಗ್ಸ್ ಸಂಗ್ರಹದಿAದ ತುಂಬಿದ ಗಾಜಿನ ಭರಣಿಯನ್ನು ಇನ್ಸಿನರೇಟರ್ ಫೈರ್ ಬಿನ್‌ಗೆ ಖಾಲಿ ಮಾಡಿ, ಭರಣಿಯೊಳಗೆ ಮುಳುಗಿರುವ ಮಗುವಿನ ಗೊಂಬೆಯನ್ನು ಮುಕ್ತಗೊಳಿಸುವುದರ ಮೂಲಕ ಸಾಂಕೇತಿಕವಾಗಿ ಆಭಿಯಾನವನ್ನು ಉದ್ಘಾಟಿಸಿದರು.

ಬಿಷಪ್ ಸಲ್ಡಾನ್ಹಾ ಅವರು ತಮ್ಮ ಸಂದೇಶದಲ್ಲಿ ನಗರದಲ್ಲಿನ ಮಾದಕ ದ್ರವ್ಯ ಬಿಕ್ಕಟ್ಟನ್ನು ಪರಿಹರಿಸುವ ತುರ್ತು ಕುರಿತು ಒತ್ತಿ ಹೇಳಿದರು. “ನಗರದಲ್ಲಿನ ಮಾದಕ ದ್ರವ್ಯಗಳ ಹಾವಳಿಯ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ನಾವು ಸಂವೇದನಾಶೀಲರಾಗಿದ್ದರೆ, ನಾವು ಅಪರಾಧಿಗಳಾಗುತ್ತೇವೆ” ಎಂದು ಅವರು ಹೇಳಿದರು. “ನಾವು ಸರ್ಕಾರ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು, ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡಿದಾಗ, ಈ ಹೋರಾಟವನ್ನು ಎದುರಿಸುವುದು ಸುಲಭವಾಗುತ್ತದೆ. ಮಾದಕ ವ್ಯಸನ ಪ್ರಕರಣಗಳಿಂದ ನಮ್ಮ ಕುಟುಂಬಗಳು, ಯುವಕರು ಮತ್ತು ಮಕ್ಕಳು ಬಳಲುತ್ತಿದ್ದಾರೆ. ಈ ಸಾಮಾಜಿಕ ಸಮಸ್ಸೆಗೆ ಒಮ್ಮನಸಿನಿಂದ ಸ್ಪಂದಿಸಲು ನಾನು ನಿಮಗೆ ಕರೆ ನೀಡುತ್ತೇನೆ. ಜಾತಿ, ಧರ್ಮ, ಧರ್ಮ ಮತ್ತು ಭಾಷೆಯ ಎಲ್ಲಾ ಗಡಿಗಳನ್ನು ಮೀರಿ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಒಟ್ಟಾಗಿ ಕೆಲಸ ಮಾಡೋಣ ಎಂದು ಬಿಷಪ್ ಕರೆ ನೀಡಿದರು. 

“ಡ್ರಗ್ಸ್ ತ್ಯಜಿಸಿ, ಜೀವನ ಆಲಿಂಗಿಸಿ” ಎಂಬ ಘೋಷವಾಕ್ಯವನ್ನು ಹೊಂದಿರುವ ಅಭಿಯಾನವು, ಧರ್ಮಕ್ಷೇತ್ರದ ಚರ್ಚುಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೆಪ್ಟೆಂಬರ್ 1 ರಿಂದ 30 ರವರೆಗೆ ಇಡೀ ತಿಂಗಳಲ್ಲಿ ನಡೆಯುವುದು” ಎಂದು ಅಭಿಯಾನದ ಸಂಚಾಲಕರಾದ ಶ್ರೀ ಲುವಿ ಜೆ ಪಿಂಟೋ ಅವರು ಮಂಗಳೂರು ಧರ್ಮಪ್ರಾಂತ್ಯದ ಕಥೋಲಿಕ್ ಕ್ರೈಸ್ತ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಯೋಜಿಸಲಾದ ವ್ಯಾಪಕ ಪ್ರಯತ್ನಗಳನ್ನು ವಿವರಿಸುತ್ತಾ ಹೇಳಿದರು.

Edited By :
Anil Fernandes

Anil Fernandes

04/09/2023 07:13 pm

Cinque Terre

242

Cinque Terre

0

ಸಂಬಂಧಿತ ಸುದ್ದಿ